Monday, May 16, 2011

ಪ್ರೀತಿ ಪುಸ್ತಕ

ಪ್ರೀತಿ ಪುಸ್ತಕ
ನೀವು ಪುಸ್ತಕ ಪ್ರೀತಿಸುತ್ತೀರಾ? ಪುಸ್ತಕ ಮತ್ತು ಅದರ ಪ್ರೀತಿಯನ್ನು ಹಂಚುವ ಆಸೆ ಹೊತ್ತವರ ‘ಒನ್ ಸ್ಟಾಪ್ ಶಾಪ್‘ ಇದು. ಇತ್ತೀಚಿಗೆ ಪ್ರಕಟವಾದ, ಪುಸ್ತಕಗಳ ಪರಿಚಯ, ವಿಮರ್ಶೆ ಇಲ್ಲಿ ಸಿಗುವಂತೆ ಮಾಡುವುದು ನಮ್ಮ ಆಶಯ. ಇದು, ನಮ್ಮ ಪತ್ರಿಕೆಗಳಲ್ಲಿ ಬರುವ ಪುಸ್ತಕ ಪರಿಚಯ-ವಿಮರ್ಶೆ ಯ ಡೈಜೆಸ್ಟ್ ಸಹ. ನೀವು ಓದಿದ, ಮೆಚ್ಚಿದ, ಎಲ್ಲರೂ ಓದಲೇಬೇಕೆಂದು ನೀವು ಬಯಸುವ ಪುಸ್ತಕದ ಬಗ್ಗೆ ಬರೆಯಿರಿ. ನಿಮಗೆ ಸಿಗದ ಪುಸ್ತಕ ಎಲ್ಲಿ ಸಿಗಬಹುದು ಎಂಬ ಬಗ್ಗೆ ಪ್ರಶ್ನೆ ಕೇಳಿ. ನೀವು ಲೇಖಕರು ಅಥವಾ ಪ್ರಕಾಶಕರಾಗಿದ್ದರೆ ನಿಮ್ಮ ಪುಸ್ತಕಗಳ ಮಾಹಿತಿ ಕಳಿಸಿ. ಪುಸ್ತಕದ ಎಲ್ಲಾ ಮಗ್ಗುಲುಗಳನ್ನು ಮುಟ್ಟುವ ನಮ್ಮ ಆಶಯದಲ್ಲಿ ಕೈಜೋಡಿಸಿ

ಬ್ಲಾಗ್ ಬಗ್ಗೆ ಒಂದಷ್ಟು




ಪುಸ್ತಕ ಲೋಕಕ್ಕೆ ಮೀಸಲಾದ ಈ ಬ್ಲಾಗ್ನಲ್ಲಿ


ನಮ್ಮ ಪ್ರಕಾಶನದ ಪುಸ್ತಕಗಳ ಮಾಹಿತಿ


ನಮ್ಮ ಹೊಸ ಪ್ರಕಟಣೆಗಳ ವಿವರ


ಪುಸ್ತಕಗಳ ಪರಿಚಯ


ವಿಮರ್ಶಾ ಲೇಖನ


ಲೇಖಕರ ಪರಿಚಯ


ಒಟ್ಟು ಪುಸ್ತಕ ಲೋಕದ ಕಡೆಗಷ್ಟೇ ಗಮನ ಹರಿಸಲುಪುಸ್ತಕಗಳ ವಿವರಗಳನ್ನು


ಕೊಡಲು ಈ ಬ್ಲಾಗ್ ಇದೆ .


ನೆನಪಿರಲಿ ಈ ಬ್ಲಾಗ್

ನಮ್ಮ ಪ್ರಕಾಶನದ ಪ್ರಕಟಣೆಗಳಿಗಷ್ಟೇಮಿಸಲಾಗಿರುವುದಿಲ್ಲ


ನೀವೂನಿಮ್ಮ ಪುಸ್ತಕ


ನಿಮ್ಮ ಪ್ರಕಾಶನದ ಪುಸ್ತಕಗಳ ಮಾಹಿತಿ ಕಳಿಸಿಕೊಡಿ


ಹೊಸ ಪುಸ್ತಕಗಳ ಕುರಿತು ಬರಿಯಿರಿ


ಬ್ಲಾಗ್ ಹೊಸ ಚರ್ಚೆಗೊಂದು ವೇದಿಕೆ


-ಬಸೂ

ಹುತಾತ್ಮ ದಿನದ ಸಂದರ್ಭದಲ್ಲಿ ಅಮರ ಹುತಾತ್ಮ ಭಗತ್ ಸಿಂಗರ ಜೈಲಿನ ದಿನಚರಿ



1931 ರ ಮಾರ್ಚ್ 23. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಭಾರತೀಯರ ಪಾಲಿಗೆ ಅತ್ಯಂತ ದುಃಖದಾಯಕ ದಿನ. ಅಂದು ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳನ್ನು ಬ್ರಿಟಿಷ್ ಸರ್ಕಾರ ನೇಣಿಗೇರಿಸಿದ ದಿನ. ಇಂದಿಗೂ ಭಗತ್ ಸಿಂಗ್ ಹುತಾತ್ಮನಾಗಿರದಿದ್ದರೆ ಈಗ ಇಷ್ಟು ವರ್ಷದ ಹಿರಿಯರಾಗಿರುತ್ತಿದ್ದರು ಅಯ್ಯೋ, ಆ ದಿನ ಕ್ಯಾಲೆಂಡರಿನಲ್ಲೇ ಇರಬಾರದಿತ್ತು ಎಂದು ದೇಶಭಕ್ತ ಭಾರತೀಯರು (ಹಿರಿಯ ಕಿರಿಯರೆನ್ನದೆ) ಹಂಬಲಿಸುವ ದಿನ. ಅವರ ಬಗ್ಗೆ ನೆನಸುವ ದಿನ.


ಭಗತ್ ಸಿಂಗ್ ತನ್ನ ಕೊನೆಯ ಎರಡು ವರ್ಷಗಳನ್ನು ಜೈಲಿನಲ್ಲಿ ಗಲ್ಲು ಶಿಕ್ಷೆಯನ್ನು ಕಾಯುತ್ತಾ ಕಳೆದಿದ್ದರು. ಈ ಅವಧಿಯಲ್ಲಿ ಹುತಾತ್ಮ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಕಾನೂನು ಸಮರಗಳಲ್ಲಿ ಹೆಚ್ಚು ಪ್ರಚಾರವನ್ನು ಪಡೆದ ಒಂದು ಕಾನೂನು ಸಮರವನ್ನು ನಡೆಸುತ್ತಿದ್ದರು. ಇಷ್ಟೇ ಅಲ್ಲದೆ ನ್ಯಾಯಾಲಯವನ್ನೇ ಮಾದ್ಯಮ ಮಾಡಿಕೊಂಡು ತಮ್ಮ ಕ್ರಾಂತಿಕಾರಿ ಸಂದೇಶಗಳನ್ನು ದೇಶಾದ್ಯಂತ ಪ್ರಚಾರ ಮಾಡಿದರು.



ಅವರ ಹೋರಾಟದ ನಿಜಾಂಶ ತಿಳಿಯದ ಈಗಿನ ಜನತೆ ಭಗತ್ ಸಿಂಗ್ ಮತ್ತು ಅವರ ಸಂಗಾತಿಗಳು ಅನ್ಯಾಯವಾಗಿ ನೇಣಿಗೆ ಕೊರಳು ಕೊಟ್ಟರು, ಅವರು ಮನಸ್ಸು ಮಾಡಿದ್ದರೆ ಬದುಕಿರಬಹುದಾಗಿತ್ತು, ಅವರ ಹುತಾತ್ಮರಾಗುವ ನಿರ್ಧಾರ ತಪ್ಪು, ಬದುಕಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಾಗಿತ್ತು ಎಂದೆಲ್ಲಾ ಹೇಳುತ್ತಾರೆ. ಆದರೆ ಭಗತ್ ಸಿಂಗ್ ಅವರು ಖಂಡಿತವಾಗಿಯು ಸುಮ್ಮನೆ ಹುತಾತ್ಮರಾಗಲಿಲ್ಲ. ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಲ್ಪಾವಧಿಯ ಜೀವಮಾನದಲ್ಲಿ ಎಷ್ಟು ಸಾಧ್ಯವೋ ಅದಕ್ಕಿಂತ ಹೆಚ್ಚಿನ ಕೊಡುಗೆ ಭಗತ್ ಸಿಂಗ್ ಅವರದಿದೆ. ಅವರು ತಮ್ಮ ನೇಣಿನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಾನೂನು ಸಮರ ಮಾಡಿ ಸಮಯ ವ್ಯರ್ಥ ಮಾಡದೇ ಆ ಅಮೂಲ್ಯ ಸಮಯವನ್ನು ದೇಶದ ಜನತೆಗೆ ಬ್ರಿಟೀಷ್ ಸರ್ಕಾರದ ಎಡಬಿಡಂಗಿತನವನ್ನು ಅರಿತುಕೊಳ್ಳುವಂತೆ ಮಾಡಿ ದೇಶದ ಜನತೆ ಸ್ವಾತಂತ್ರ್ಯಕ್ಕಾಗಿ ಹೋರಾಡುವಂತೆ ಜೈಲಿನಲ್ಲಿದ್ದೂ ಪ್ರೇರೇಪಣೆ ನೀಡಿದರು.ಅಷ್ಟೇ ಅಲ್ಲ ಜೈಲಿನಲ್ಲಿ ಅವರು ನಾಲ್ಕು ಪುಸ್ತಕಗಳನ್ನೂ ಬರೆದಿದ್ದರು. ಆ ಪುಸ್ತಕಗಳು ಜೈಲಿನಿಂದ ಕಷ್ಟಪಟ್ಟು ಹೊರತರಲ್ಪಟ್ಟಿದ್ದರೂ ನಾಶ ಮಾಡಲ್ಪಟ್ಟಿವೆ. ಜೈಲಿನಲ್ಲೇ ಉಳಿದಿದ್ದ ಯುವ ಕ್ರಾಂತಿಕಾರಿಯ ಟಿಪ್ಪಣೆ ಪುಸ್ತಕ ಮಾತ್ರ ನಮಗೀಗ ಲಭ್ಯವಿದೆ.
ಯುವ ಕ್ರಾಂತಿಕಾರಿಯನ್ನು ಅಧ್ಯಯನ ಮಾಡಲು ಇದೊಂದು ಅದ್ಬುತ ಗ್ರಂಥ.



ಶೀರ್ಷಿಕೆ : The Jail Notebook and Other Writings ಲೇಖಕರು: ಭಗತ್ ಸಿಂಗ್ ಸಂಪಾದಕರು: ಚಮನ್ ಲಾಲ್


ಲಡಾಯಿ ಪ್ರಕಾಶನದಿಂದ ಕನ್ನಡಕ್ಕೆ ಅನುವಾದಗೊಂಡು ಈ ಪುಸ್ತಕವು ಜೂನ್ ತಿಂಗಳಲ್ಲಿ ಹೊರಬರಲಿದೆ .. ಪುಸ್ತಕದ ಅನುವಾದಕರು ನಾ ದಿವಾಕರ